Monday, November 1, 2010

ನಾನು


  ಕನ್ನಡ ರಾಜ್ಯೋತ್ಸವದಂದು ಎಲ್ಲ ಕನ್ನಡದ ಮನಸ್ಸುಗಳಿಗೆ ರಾಜ್ಯೋತ್ಸವದ ಶುಭಾಶಯಗಳು. ಕನ್ನಡ ಪ್ರೀತಿ ಕೇವಲ ಈ ದಿನಕ್ಕೆ ಮಾತ್ರ ಸೀಮಿತವಾಗಿರದೆ ಸದಾಕಾಲ ಪಸರಿಸುತಿರಲಿ.

೧ 
ವಿಶ್ವ ಮಾತೆಯ ಗರ್ಭಕಮಲಜಾತ-ಪರಾಗ-
ಪರಮಾಣು ಕೀರ್ತಿ ನಾನು !
ಭೂಮಿತಾಯಿಯ ಮೈಯ ಹಿಡಿಮಣ್ಣ ಗುಡಿಗಟ್ಟ 
ನಿಂತಂಥ ಮೂರ್ತಿ ನಾನು !

 ೨
 ಭಾರತಮಾತೆಯ ಕೋಟಿ ಕಾರ್ತಿಕೋತ್ಸವದಲ್ಲಿ
ಮಿನುಗುತಿಹ ಜ್ಯೋತಿ ನಾನು !
ಕನ್ನಡದ ತಾಯಿ ತಾವರೆಯ ಪರಿಮಳವುಂಡು
ಬೀರುತಿಹ ಗಾಳಿ ನಾನು !

೩ 
 ನನ್ನ ತಾಯಿಯ ಹಾಲು ನೆತ್ತರವ ಕುಡಿದಂಥ
ಜೀವಂತ ಮಮತೆ ನಾನು !
ಈ  ಐದು ಐದೆಯರ ಪಂಚಪ್ರಾಣಗಳಾಗಿ 
ಈ ಜೀವ ದೇಹನಿಹನು !

 ೪
ಹೃದಯಾರವಿಂದದಲ್ಲಿರುವ ನಾರಾಯಣನೆ
ತಾನಾಗಿ ದತ್ತ ನರನು !
ವಿಶ್ವದೊಳನುಡಿಯಾಗಿ ಕನ್ನಡಿಸುತಿಹನಿಲ್ಲಿ 
ಅಂಬಿಕಾತನಯನಿವನು !  


                                        - ದ. ರಾ. ಬೇಂದ್ರೆ












No comments:

Powered By Blogger

Followers